ಬಿಜೆಪಿ ಪರಿವರ್ತನಾ ಯಾತ್ರೆ : ಸಿದ್ದಾರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ | Oneindia Kannada

2017-11-02 2,186

ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಗುರುವಾರ ಚಾಲನೆ ನೀಡಿದೆ. ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು..ಕರ್ನಾಟಕ ಬಿಜೆಪಿ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ'ಯನ್ನು ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಗುರುವಾರ ಮಧ್ಯಾಹ್ನ ಈ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಿದರು...ಯಡಿಯೂರಪ್ಪ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಆರಂಭಿಸಿದ್ದಾರೆ. ಜೋರಾಗಿ ಭಾರತ್ ಮಾತಾಕೀ ಜೈ ಎನ್ನಿ ಎಂದು ಅಮಿತ್ ಶಾ ಭಾಷಣ ಆರಂಭಿಸಿದರು. * ಈ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಯಾತ್ರೆ ಮೂಲಕ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯಲು ಈ ಯಾತ್ರೆ ಆರಂಭಿಸಲಾಗಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ರು..

BJP National president Amit Shah address Nava Karnataka Nirmana Parivartan Yatra in Bengaluru, Karnataka on November 2, 2017. In the yatra BJP kick start the party's election campaign for 2018 assembly elections.

Videos similaires