News Cafe | No Leadership Change In Karnataka: BS Yediyurappa | HR Ranganath | Aug 11, 2022

2022-08-11 1

ಸಿಎಂ ಬೊಮ್ಮಾಯಿ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಚಾಲ್ತಿ ಇರೋವಾಗಲೇ ರಾಜ್ಯ ಪ್ರವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಸಿದ್ಧಗೊಂಡಿದ್ದಾರೆ. ಇದೇ ತಿಂಗಳು 21ರಿಂದ ರಾಜ್ಯದೆಲ್ಲೆಡೆ ಪ್ರವಾಸಕ್ಕೆP ಮುಂದಾಗಿದ್ದಾರೆ. 3 ತಂಡಗಳಾಗಿ ರಾಜ್ಯ ಪ್ರವಾಸ ಮಾಡುವುದಕ್ಕೆ, ಶೀಘ್ರದಲ್ಲೇ ಪ್ರವಾಸದ ರೂಪರೇಷೆ ಸಿದ್ಧಪಡಿಸಲಾಗುವುದು ಅಂತ ಯಡಿಯೂರಪ್ಪ ಹೇಳಿದ್ದಾರೆ. ಚುನಾವಣೆ ಹತ್ತಿರದಲ್ಲೇ ಇರೋದರಿಂದ ಸಿಎಂ ಬದಲಾವಣೆ ವಿಚಾರ ಇಲ್ಲ.. ಬೊಮ್ಮಾಯಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಊಹಾಪೋಹ ಬೇಡ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೆವೆ ಎಂದ್ರು. ಅಲ್ಲದೇ ನಾನು ರಾಜೀನಾಮೆ ಕೊಟ್ಟ ನಂತರವೇ ಸಿಎಂ ಆಯ್ಕೆ ಆಗಿದೆ. ನನಗೆ ಪಕ್ಷ ಎಲ್ಲಾ ರೀತಿಯ ಗೌರವ ನೀಡಿದೆ ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ.. ಕೇಂದ್ರ ಒಪ್ಪಿದರೆ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆಗೆ ಅವಕಾಶ ಸಿಗಲಿದೆ. ಸಂಪುಟ ವಿಸ್ತರಣೆಯ ಮೂಲಕ ಸಿಎಂ ರಾಜ್ಯದ ಎಲ್ಲ ಪ್ರದೇಶಕ್ಕೆ ಪ್ರಾಶಸ್ತ್ಯ ನೀಡಲಿದ್ದಾರೆ ಎಂದ್ರು. ಈ ಮಧ್ಯೆ, ರಾಯರ ಆರಾಧನಾ ಮಹೋತ್ಸವ ನಡೆಯುತ್ತಿರುವ ಮಂತ್ರಾಲಯಕ್ಕೆ ಇವತ್ತು ಬಿಎಸ್‍ವೈ ಭೇಟಿ ನೀಡಲಿದ್ದಾರೆ.

#publictv #newscafe #hrranganath