ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ (Rain) ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ನೀವು ಭಾರೀ ಮಳೆಯಲ್ಲಿ ವಾಹನ ಚಲಾಯಿಸುವುದು ಹೆಚ್ಚು ಕಷ್ಟಕರವಾಗಿದೆ. ಅಲ್ಲದೇ ಅಪಾಯಕಾರಿಯಾಗಿ ಕೂಡ ಹೌದು. ಕಡಿಮೆ ಗೋಚರತೆ, ಜಾರುವ ರಸ್ತೆಗಳು ಮತ್ತು ನೀರು ಜಲಾವೃತವಾದ ರಸ್ತೆಗಳಲ್ಲಿ ಚಲಿಸುವುದು ಅಪಾಯಕಾರಿ.
~PR.158~ED.70~##~